ದ.ಕ. ಗಡಿಭಾಗದ ಎಲ್ಲ ಮದ್ಯದಂಗಡಿ ಮುಚ್ಚಲು ಡಿಸಿ ಆದೇಶ

 ದ.ಕ. ಗಡಿಭಾಗದ ಎಲ್ಲ ಮದ್ಯದಂಗಡಿ ಮುಚ್ಚಲು ಡಿಸಿ ಆದೇಶ

ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್‌-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆ.3ರಿಂದ 15ರ ವರೆಗೆ ದ.ಕ. ಜಿಲ್ಲೆಯ ಗಡಿ ಭಾಗಗಳಲ್ಲಿ ಮದ್ಯದಂಗಡಿ ಬಂದ್‌ ಮಾಡುವಂತೆ ದ.ಕ. ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶಿಸಿದ್ದಾರೆ. ಒಟ್ಟು 19 ಗ್ರಾಮಗಳ 29 ಮದ್ಯದಂಗಡಿ ಬಂದ್‌ ಆಗಲಿದೆ.ಈ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ. ನಿಷೇಧಾಜ್ಞೆ ಜಾರಿಗೊಂಡಿರುವ ಸಮಯದಲ್ಲಿ ಆ ವ್ಯಾಪ್ತಿಗೊಳಪಟ್ಟವೈನ್‌ಶಾಪ್‌ ಅಥವಾ ಬಾರ್‌ಗಳ ಮುಂದಿನ ಮತ್ತು ಹಿಂದಿನ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು (ಸೀಲು) ಗಳನ್ನು ಹಾಕಿ ಕಡ್ಡಾಯವಾಗಿ ಮುಚ್ಚುವಂತೆ ನೋಡಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ