ರಾಜ್ಯದಲ್ಲಿ ಇಂದು 1298 ಮಂದಿಗೆ ಕೊರೋನಾ ಸೋಂಕು – 3 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1298 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇದರಂದಾಗಿ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,31,827 ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ 1833 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 28,73,281 ಜನ ಗುಣಮುಖರಾಗಿದ್ದಾರೆ. ಇಂದು ಕೊರೋನಾ ಸೋಂಕಿನಿಂದ 32 ಮಂದಿ ಮೃತಪಟ್ಟಿದ್ದು, ಇದುವರೆಗೆ 37,039 ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಒಟ್ಟು 21,481 ಸಕ್ರಿಯ ಪ್ರಕರಣಗಳು ಇದ್ದು, ಪಾಸಿಟಿವಿಟಿ ದರ ಶೇಕಡ 1.01 ರಷ್ಟು ಇದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 340 ಜನರಿಗೆ ಸೋಂಕು ತಗುಲಿದೆ. 10 ಜನ ಮೃತಪಟ್ಟಿದ್ದಾರೆ. 471 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 7913 ಸಕ್ರಿಯ ಪ್ರಕರಣಗಳು ಇವೆ.
ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ
ಬಾಗಲಕೋಟೆ , ಬಳ್ಳಾರಿ , ಬಿದರ್ ಜಿಲ್ಲೆಗಳಲ್ಲಿ ಯಾವುದೇ ಸೋಂಕು ಪ್ರಕರಣ ಪತ್ತೆಯಾಗಿಲ್ಲ. ಉಳಿದಂತೆ ಚಾಮರಾಜನಗರ 7, ಚಿಕ್ಕಬಳ್ಳಾಪುರ 2, ಚಿತ್ರದುರ್ಗ 7, ಧಾರವಾಡ 5, ಗದಗ 1, ಹಾವೇರಿ 1, ಕಲ್ಬುರ್ಗಿ 4, ಕೊಪ್ಪಳ 1, ರಾಮನಗರ 3, ವಿಜಯಪುರ 2, ಯಾದಗಿರಿ 3 ಪ್ರಕರಣ ವರದಿಯಾಗಿವೆ., ಚಿಕ್ಕಮಗಳೂರು 59, ದಕ್ಷಿಣಕನ್ನಡ 288, ಹಾಸನ 66, ಮೈಸೂರು 88, ಶಿವಮೊಗ್ಗ 51, ತುಮಕೂರು 52, ಉಡುಪಿ 122, ಉತ್ತರಕನ್ನಡ 48 ಜನರಿಗೆ ಸೋಂಕು ತಗುಲಿದೆ.
ಮೃತರ ಸಂಖ್ಯೆ:
ಬಳ್ಳಾರಿ 1, ಬೆಳಗಾವಿ 1, ಬೆಂಗಳೂರು ನಗರ 10, ದಕ್ಷಿಣ ಕನ್ನಡ 5, ದಾವಣಗೆರೆ 1, ಹಾಸನ 2, ಕೊಡಗು 2, ಕೋಲಾರ 2, ಮಂಡ್ಯ 1, ಮೈಸೂರು 2, ಶಿವಮೊಗ್ಗ 2, ತುಮಕೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.