Warning: array_intersect(): Expected parameter 2 to be an array, null given in /home/u327821803/domains/todayexpress.in/public_html/wp-content/plugins/page-or-post-clone/page-or-post-clone.php on line 123

Warning: include_once(/home/u327821803/domains/todayexpress.in/public_html/wp-includes/header.php): failed to open stream: No such file or directory in /home/u327821803/domains/todayexpress.in/public_html/wp-config.php on line 91

Warning: include_once(): Failed opening '/home/u327821803/domains/todayexpress.in/public_html/wp-includes/header.php' for inclusion (include_path='.:/opt/alt/php74/usr/share/pear') in /home/u327821803/domains/todayexpress.in/public_html/wp-config.php on line 91
ರಾಜ್ಯದಲ್ಲಿ ಮತ್ತಷ್ಟು ಕಡಿಮೆಯಾದ ಕೊರೋನಾ: ಇಂದು 3202 ಹೊಸ ಕೇಸ್ ಪತ್ತೆ – Today Express

ರಾಜ್ಯದಲ್ಲಿ ಮತ್ತಷ್ಟು ಕಡಿಮೆಯಾದ ಕೊರೋನಾ: ಇಂದು 3202 ಹೊಸ ಕೇಸ್ ಪತ್ತೆ

 ರಾಜ್ಯದಲ್ಲಿ ಮತ್ತಷ್ಟು ಕಡಿಮೆಯಾದ ಕೊರೋನಾ: ಇಂದು 3202 ಹೊಸ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಬ್ಬರ ಮತ್ತಷ್ಟು ಇಳಿಕೆಯಾಗಿದೆ. ಮುಖವಾಗಿದ್ದು, ಇಂದು ರಾಜ್ಯದಲ್ಲಿ 3202 ಹೊಸ ಪ್ರಕರಣಗಳು ದಾಖಲಾಗಿದ್ದು, ಪಾಸಿಟಿವಿಟಿ ದರ ಶೇಕಡ 2.95ಕ್ಕೆ ಇಳಿಕೆಯಾಗಿದೆ. ಇಂದು 38 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು ಒಂದೇ ದಿನ 1,08,534 ಪರೀಕ್ಷೆ ನಡೆಸಲಾಗಿದೆ. 8988 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 38,747 ಸಕ್ರಿಯ ಪ್ರಕರಣಗಳಿವೆ.

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ 1293 ಹೊಸ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇಕಡ 2.49 ರಷ್ಟು ಇದೆ. ಬೆಂಗಳೂರಿನಲ್ಲಿ ಇಂದು 10 ಜನ ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 15,679 ಸಕ್ರಿಯ ಪ್ರಕರಣಗಳಿವೆ. 3833 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 39,24,297 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 39,613 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 38,45,903 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಬಳ್ಳಾರಿ 126, ಬೆಳಗಾವಿ 250, ಕೊಡಗು 99, ಚಿತ್ರದುರ್ಗ 91, ಮೈಸೂರು 197, ಶಿವಮೊಗ್ಗ 155, ತುಮಕೂರು 142 ಹೊಸ ಪ್ರಕರಣ ವರದಿಯಾಗಿವೆ.

ಬೆಂಗಳೂರು ನಗರ 10, ಬಳ್ಳಾರಿ 2, ಬೀದರ್ 2, ದಕ್ಷಿಣಕನ್ನಡ 4, ಧಾರವಾಡ 2, ಹಾವೇರಿ 3, ಮೈಸೂರು 2, ರಾಯಚೂರು 2, ತುಮಕೂರು 2 ಸೇರಿ ರಾಜ್ಯದಲ್ಲಿ 38 ಜನ ಸೋಂಕಿತರು ಮೃತಪಟ್ಟಿದ್ದಾರೆ. ಕೆಲದಿನಗಳಿಂದ ಹೆಮ್ಮಾರಿ ಕೊರೋನಾ ವೈರಸ್ ಆರ್ಭಟ ಕಡಿಮೆಯಾಗಿದ್ದು, ಕೊಂಚ ನೆಮ್ಮದಿ ತಂದಿದೆ.