ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಬ್ಬರ ಮತ್ತಷ್ಟು ಇಳಿಕೆಯಾಗಿದೆ. ಮುಖವಾಗಿದ್ದು, ಇಂದು ರಾಜ್ಯದಲ್ಲಿ 3202 ಹೊಸ ಪ್ರಕರಣಗಳು ದಾಖಲಾಗಿದ್ದು, ಪಾಸಿಟಿವಿಟಿ ದರ ಶೇಕಡ 2.95ಕ್ಕೆ ಇಳಿಕೆಯಾಗಿದೆ. ಇಂದು 38 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು ಒಂದೇ ದಿನ 1,08,534 ಪರೀಕ್ಷೆ ನಡೆಸಲಾಗಿದೆ. 8988 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 38,747 ಸಕ್ರಿಯ ಪ್ರಕರಣಗಳಿವೆ. ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ 1293 ಹೊಸ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇಕಡ 2.49 ರಷ್ಟು ಇದೆ. ಬೆಂಗಳೂರಿನಲ್ಲಿ ಇಂದು 10 ಜನ ಸೋಂಕಿತರು […]Read More
ಮುಂಬೈ: ಗಾನ ಕೋಗಿಲೆ, ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಭಾನುವಾರ ಸಂಜೆ ಮುಂಬೈನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಪ್ರಧಾನಿ ಮೋದಿ ಸೇರಿದಂತೆ ಬಾಲಿವುಡ್ ದಂಡೇ ಹರಿದು ಬಂದಿತ್ತು. ಹಾಗಾದ್ರೆ, ಯಾವೆಲ್ಲಾ ಬಾಲಿವುಡ್ ನಟ- ನಟಿಯರು ಭಾಗವಹಿಸಿದ್ದರು ಅಂತ ಇಲ್ಲಿದೆ ನೋಡಿ… ಬಾಲಿವುಡ್ ಬಾದ್ ಶಾ ಶಾರುಕ್ ಖಾನ್ ಅಂತಿಮ ನಮನ ಸಲ್ಲಿಸಿದರು. ಗಾನ ಕೋಗಿಲೆಗೆ ರಣಬಿರ್ ಕಪೂರ್ ಅಂತಿಮ ನಮನ ಸಲ್ಲಿಸಿದರು. ಶ್ರದ್ಧಾ ಕಪೂರ್.. ಇನ್ನು, ಬೆಳಗ್ಗೆ ಬಿಗ್ ಬಿ ಅಮಿತಾಬ್ ಬಚ್ಚನ್, […]Read More
ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಇರುವಂತೆಯೇ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯನ್ನ ಘೋಷಣೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಪಕ್ಷದ ಸಂಪ್ರದಾಯ ಮುರಿದು ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಘೋಷಣೆ ಮಾಡಿದ್ದಾರೆ ರಾಹುಲ್ ಗಾಂಧಿ. ಈವರೆಗೆ ಪಕ್ಷವು ಬಹುಮತ ಪಡೆದ ನಂತರವಷ್ಟೇ ಮುಖ್ಯಮಂತ್ರಿ ಯಾರು ಎಂಬುದನ್ನ ಆಯ್ಕೆ ಮಾಡಲಾಗುತ್ತಿತ್ತು. ಆದರೆ, ಪಂಜಾಬ್ ನಲ್ಲಿ ಹಳೆಯ ಸಂಪ್ರದಾಯಕ್ಕೆ ಇತಿಶ್ರೀಯ ಹಾಡಲಾಗಿದೆ. ಹಾಲಿ ಮುಖ್ಯಮಂತ್ರಿ ಚರಣ್ ಜಿತ್ ಚನ್ನಿ ಸಿಎಂ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ […]Read More
ಮುಂಬೈ: ಬಹು ಅಂಗಾಂಗ ವೈಫಲ್ಯದಿಂದ ಇಂದು ನಿಧನರಾಗಿದ್ದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ರವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಈ ಮೂಲಕ ಗಾನ ಕೋಗಿಲೆ ಲತಾ ಮಂಗೇಶ್ಕರ್ ಪಂಚ ಭೂತಗಳಲ್ಲಿ ಲೀನವಾದರು. ಇದಕ್ಕೂ ಮೊದಲಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟ-ನಟಿಯರು ಸೇರಿದಂತೆ ವಿವಿಧ ಗಣ್ಯರು ಅಂತಿಮನ ನಮನ ಸಲ್ಲಿಸಿದರು. ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ಇಂದು […]Read More
ಬೆಂಗಳೂರು: ಕೊರೋನಾದಿಂದ ಕಂಗೆಟ್ಟಿದ್ದ ನಾಡಿನ ಜನ ಇಂದು ಕೊಂಚ ಸಮಾಧಾನ ಪಡುವ ಸುದ್ದಿ ಬಂದಿದೆ. ರಾಜ್ಯದಲ್ಲಿ ಇಂದು ಹೊಸ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 3,822 ಮಂದಿ ಸೇರಿ ರಾಜ್ಯಾದ್ಯಂತ 8,425 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಕಳೆದ 24 ಗಂಟೆಯಲ್ಲಿ 1,29,337 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 3,822 […]Read More
ಆಗ್ರಾ: ಅಮೆರಿಕಾ ಸೇರಿದಂತೆ ಎಲ್ಲಾ ಮುಂದುವರಿದ ರಾಷ್ಟ್ರಗಳಿಗಿಂತಲೂ ಭಾರತ ಉತ್ತಮವಾಗಿ ಕೋವಿಡ್ ಪರಿಸ್ಥಿತಿ ನಿಭಾಯಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಇಲ್ಲಿನ ವಿಧಾನಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಇತರೆ ಯಾವುದೇ ರಾಷ್ಟ್ರಗಳು ತನ್ನ ಪ್ರಜೆಗಳಿಗೆ ಭಾರತದಂತೆ ಅತ್ಯಂತ ವೇಗವಾಗಿ ಲಸಿಕೆ ನೀಡಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು. ಇದೇ ವೇಳೆ ಸಮಾಜವಾದಿ ಪಕ್ಷವನ್ನ ಟೀಕಿಸಿದ ಸಿಂಗ್, ಬಿಜೆಪಿಯಿಂದ ಮಾತ್ರ ಉತ್ತರ ಪ್ರದೇಶವನ್ನ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಸಾಧ್ಯ. ಸಮಾಜವಾದಿ ಪಕ್ಷವು ಜಾತಿ ಮತ್ತು […]Read More
ಮಾಲೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡರೇ, ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಮಾಲೂರು ಶಾಸಕರಾದ ಕೆ.ವೈ ನಂಜೇಗೌಡರು ಹೇಳಿದರು. ತಾಲ್ಲೂಕಿನ ಹುಳದೇನಹಳ್ಳಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ಉದ್ಘಾಟಿಸಿ ಮಾತನಾಡಿದ, ಅವರು ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದ ಮಾಜಿ ಪ್ರಾಧಾನಿ ಮನಮೋಹನ್ ಸಿಂಗ್ ರನ್ನು ಇಂದು ದೇಶ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ನರೇಗಾ ಯೋಜನೆಯಲ್ಲಿ ಗ್ರಾಮಗಳ ಅಭಿವೃದ್ಧಿ ಸಾಕಷ್ಟು ಅವಕಾಶಗಳಿವೆ. ಒಂದು ವರ್ಷದಲ್ಲಿ ಒಂದು , ಎರಡು ಕೋಟಿಯಷ್ಟು ಹಣ […]Read More
ನಂಜನಗೂಡು:, ಮಹಿಳೆಯರು ತಮ್ಮದೇ ಅಸ್ತಿತ್ವ ಕಟ್ಟಿಕೊಳ್ಳಲು ಸಾವಿತ್ರಿ ಬಾಯಿಫುಲೆ ಶಿಕ್ಷಕಿಯರ ಸಂಘ ಸಹಕಾರಿಯಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಸರಸ್ವತಿ ಹೇಳಿದರು. ಪಟ್ಟಣದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಸಂಘದ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂಘವು ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. , ಸಾವಿತ್ರಿ ಬಾಯಿಫುಲೆ ಶಿಕ್ಷಕಿಯರ ಸಂಘದ ರಾಜ್ಯದ ಮೊದಲ ಮಹಿಳಾ ಶಿಕ್ಷಕಿಯರ ಸಂಘವಾಗಿದ್ದು, ತನ್ನ ಉದ್ದೇಶಿತ ಯೋಜನೆಯ ಈಡೇರಿಕೆಗೆ […]Read More
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸ್ಫೋಟ ಮುಂದುವರೆದಿದೆ. ಬೆಂಗಳೂರಿನಲ್ಲಿ 22,284 ಸೇರಿದಂತೆ ರಾಜ್ಯಾಧ್ಯಂತ 32,793 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ರವರು ತಮ್ಮ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ಕಳೆದ 24 ಗಂಟೆಯಲ್ಲಿ 2,18,479 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 22,284 ಸೇರಿದಂತೆ ರಾಜ್ಯದಲ್ಲಿ 32,793ಜನರಿಗೆ ಕೋವಿಡ್ ದೃಢಪಟ್ಟಿದೆ. ರಾಜ್ಯದಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 1,69,850ಕ್ಕೆ ಏರಿಕೆಯಾಗಿವೆ. ಇಂದು ರಾಜ್ಯದಲ್ಲಿ 32,793 […]Read More
ಕನ್ನಡದ ಹಿರಿಯ, ಬಂಡಾಯ ಸಾಹಿತಿ ಚಂದ್ರಶೇಖರ್ ಪಾಟೀಲ್ (83) ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಚಂಪಾ ಎಂದೇ ಪ್ರಸಿದ್ಧವಾಗಿದ್ದ ಚಂದ್ರಶೇಖರ್ ಪಾಟೀಲ್, ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ವಿಭಿನ್ನ ನೆಲೆಗಳಲ್ಲಿ ಗುರುತಿಸಿಕೊಂಡಿದ್ದರು. ಚಂಪಾ ಹುಟ್ಟಿದ್ದು ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್ 18 ರಂದು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ. […]Read More